Latest

*21 ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Home add -Advt

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು.

ಒಟ್ಟು 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


Related Articles

Back to top button