Belagavi NewsBelgaum NewsKannada NewsKarnataka News

*ಮನೆಯ ಮುಂದೆ ‌ನಿಲ್ಲಿಸಿದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು*

ಪ್ರಗತಿವಾಹಿನಿ ಸುದ್ದಿ: ಮನೆಯ ಮುಂದೆ ‌ನಿಲ್ಲಿಸಿದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಬೆಳಗಾವಿ ಧಾಮಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಅಪರಿಚಿತ ಕಿಡಿಗೇಡಿಗಳು ಬಂದು ರಾತ್ರೋ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ನಗರದಲ್ಲಿ ಹಾಡ ಹಗಲೇ ವಾಹನಗ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ಧಾಮಣೆಯಲ್ಲಿ ವಾಹನ ಕಳ್ಳತನಕ್ಕೆ ಯತ್ನಿಸಿದ್ದರೂ ವಾಹನ ಲಾಕ್ ಇದ್ದುದ್ದರಿಂದ ಅವುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟ‌ನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button