Kannada NewsKarnataka NewsLatest

ಸರಕಾರದೊಂದಿಗೆ ಸಂಘರ್ಷಕ್ಕೆ ಸರಕಾರಿ ನೌಕರರ ಸಂಘ ಸಿದ್ಧತೆ?

ಪ್ರಗತಿವಹಾನಿ ಸುದ್ದಿ, ಬೆಂಗಳೂರು: 3 ಬೇಡಿಕೆಗಳನ್ನು ಮುಂದಿಟ್ಟು ಸರಕಾರದೊಂದಿಗೆ ಅಸಹಕಾರ ಚಳವಳಿ ನಡೆಸಲು ಮುಂದಾಗಿರುವ ಸರಕಾರಿ ನೌಕರರ ಸಂಘ ಸರಕಾರದೊಂದಿಗೆ ನೇರ ಸಂಘರ್ಷಕ್ಕಿಳಿಯಲು ನಿರ್ಧರಿಸಿದೆ. ಈ ಕುರಿತು ಈಗಾಗಲೆ ಪೂರ್ವ ಸಿದ್ಧತೆ ಆರಂಭಿಸಿದೆ.

ಚಿಕ್ಕಮಗಳೂರಿನಲ್ಲಿ ಭಾನುವಾರ ಮೊದಲ ಸಮಾವೇಶ ನಡೆದಿದ್ದು, 7ನೇ ವೇತನ ಆಯೋಗದ ವರದಿ ಜಾರಿ ಮಾಡದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಹಾಗಾಗಿ ಜುಲೈ ಅಂತ್ಯ ಇಲ್ಲವೇ ಆಗಷ್ಟ್ ಮೊದಲ ವಾರ ಪ್ರತಿಭಟನೆ ಆರಂಭಿಸಬೇಕು ಎಂದು ನಿರ್ಧರಿಸಲಾಗಿದೆ. ಆರಂಭದಲ್ಲಿ ಅಸಹಕಾರ ಚಳವಳಿ ನಡೆಸಲು ಚಿಂತನೆ ನಡೆಸಿದೆ.

ಈ ಬಾರಿ ಮುಷ್ಕರ ಕುರಿತು ಅತ್ಯಂತ ಕಠಿಣವಾದ ನಿರ್ಧಾರ ತೆಗೆದುಕೊಳ್ಳಬೇಕು. ಎಸ್ಮಾ ಜಾರಿಯಾದರೂ ಹೆದರಬಾರದು ಎಂದು ಕರೆ ನೀಡಲಾಗಿದೆ. ಪ್ರಮುಖವಾಗಿ 3 ನಿರ್ಧಾರದೊಂದಿಗೆ ಪ್ರತಿಭಟನೆ ಆರಂಭಿಸಲು ನಿರ್ಧರಿಸಲಾಗಿದೆ. 7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯಲಿದೆ.

7ನೇ ವೇತನ ಆಯೋಗ ನೀಡಿರುವ ವರದಿ ಆಧರಿಸಿ ಹಿಂದಿನ ಸರಕಾರ ಶೇ.17ರಷ್ಟು ಮಧ್ಯಂತರ ಪರಿಹಾರ ನೀಡಿದೆ. ಒಟ್ಟಾರೆ ಅಂದಾಜು ಶೇ.27ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button