Kannada NewsKarnataka NewsNationalPolitics

*ಸರಕಾರಿ ನೌಕರರ ಸಂಘದಿಂದ ಸಿಎಂ, ಡಿಸಿಎಂ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎoದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಭಿನoದನೆ ಸ್ವೀಕರಿಸಿ ಅವರು ಮಾತನಾಡಿದರು.

Home add -Advt

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು  ಎoದು ಕಿವಿ ಮಾತು ಹೇಳಿದರು.

7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊoಡಿದೆ. ಇದರಿoದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ. 

ಉಪ ಮುಖ್ಯಮoತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಹ ನೌಕರರ ಸಂಘದಿಂದ ಸನ್ಮಾನಿಸಲಾಯಿತು.

ಸoಘದ ಅಧ್ಯಕ್ಷ ಷಡಕ್ಷರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button