

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಸೋಮವಾರ ನಡೆದ ಹುಬ್ಬಳ್ಳಿಯಲ್ಲಿ, ಕರ್ನಾಟಕ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿ.,ಹುಬ್ಬಳ್ಳಿ ಇದರ ಆಡಳಿತ ಮಂಡಳಿಯ ಅಧ್ಯಕ್ಷನಾಗಿ ಅವಿರೋಧವಾಗಿ ಮಾಜಿ ಸಂಸದ ಹಾಗೂ ಜೊಲ್ಲೆ ಗ್ರೂಪ್ ನ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಮತ್ತು ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಅಕ್ಕಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಬಳಿಕ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಚುನಾವಣೆಯಲ್ಲಿ ಅಧ್ಯಕ್ಷನಾಗಿ ಆಯ್ಕೆಯಾಗಲು ನನಗೆ ಸಹಕಾರ ನೀಡಿದ ಎಲ್ಲ ನಿರ್ದೇಶಕ ಮಂಡಳಿ ಸದಸ್ಯರಿಗೆ ತುಂಬು ಹೃದಯದ ಧನ್ಯವಾದಗಳು ತಿಳಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿರ್ದೇಶಕ ಮಂಡಳಿ ಸದಸ್ಯರಾದ ಪ್ರಭಾಕರ ಡಬ್ಬನ್ನವರ, ದೀಪಕ ಪಾಟೀಲ, ಬಿ.ಟಿ.ಬೆನಕಟ್ಟಿ, ಹನುಮಂತಗೌಡ ಪಾಟೀಲ, ದಯಾನಂದ ಅಲಗೌಂಡ, ಜಗದೀಶ ತಂಬಾಕದ, ಟಿ.ಎಸ್.ಪಾಟೀಲ, ಎಂ.ಬಿ.ಪಾಟೀಲ, ಎಫ್.ಎಚ್.ಅಗಸಿಮನಿ, ವ್ಯವಸ್ಥಾಪಕ ನಿರ್ದೇಶಕರಾದ ಎಲ್.ಶಿವಪ್ರಕಾಶ ಉಪಸ್ಥಿತರಿದ್ದರು.
ಹುಬ್ಬಳ್ಳಿ ತಹಶೀಲ್ದಾರರಾಗಿ ಹಾಗೂ ಚುನಾವಣೆ ಅಧಿಕಾರಿಯಾಗಿ ಪ್ರಕಾಶ ನಾಶಿ ಕಾರ್ಯನಿರ್ವಹಿಸಿದರು.