Belagavi NewsBelgaum NewsKarnataka News

*BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅವಘಡ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ: 9 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ರೂಂ ನಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದಿದೆ.

ಯಾದಗಿರಿ ಮೂಲದ ಐವರು ಹಾಗೂ ಬೆಂಗಳೂರು ಮೂಲದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 6 ಜನರನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ದೇವರ ದರ್ಶನಕ್ಕೆಂದು ಸವದತ್ತಿಗೆ ಬಂದಿದ್ದ ಭಕ್ತರು ಸವದತ್ತಿ ಪಟ್ಟಣದ ಹೋಟೆಲ್ ನಲ್ಲಿ ಇದ್ದರು. ಈ ವೇಳೆ ಹೋಳಿಗೆ ಮಾಡಲೆಂದು ಹೋಟೆಲ್ ರೂಮಿನಲ್ಲಿ ಕುಕ್ಕರ್ ನಲ್ಲಿ ಬೇಳೆ ಬೇಯಿಸಲು ಇಟ್ಟಿದ್ದರು. ಆದರೆ ಬೇಳೆಗೆ ನೀರು ಹಾಕಲು ಮರೆತಿದ್ದಾರೆ ಎನ್ನಲಾಗಿದೆ. ಕೆಲ ಹೊತ್ತಲ್ಲೇ ಕುಕ್ಕರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಹೋಟೆಲ್ ತುಂಬ ಬೆಂಕಿ ಆವರಿಸಿದೆ. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button