LatestNational

*ಹಳಿ ತಪ್ಪಿದ ಸಬರಮತಿ ಎಕ್ಸಪ್ರೆಸ್ ರೈಲು; ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಸಬರಮತಿ ಎಕ್ಸ್ ಪ್ರೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದ ಘಟನೆ ಉತ್ತರ ಪ್ತದೇಶದಲ್ಲಿ ನಡೆದಿದೆ.

ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣದ ನಡುವಿನ ಬ್ಲಾಕ್ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಇಂದು ನಸುಕಿನ ಜಾವ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ರೈಲು ವಾರಣಾಸಿಯಿಂದ ಅಹಮದಾಬಾದ್ ಗೆ ತೆರಳುತ್ತಿತ್ತು. ಈ ವೇಳೆ ಕಾನ್ಪುರದ ಗೋವಿಂದಪುರಿ ಬಳಿ ಹೋಲ್ಡಿಂಗ್ ಲೈನ್ ಬಳಿ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ರೈಲು ಇಂಜಿನ್ ಗೆ ಬಂಡೆ ಬಡಿದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸಧ್ಯ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮೂಲಕ ಕಳುಹಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button