Belagavi NewsBelgaum NewsKannada NewsKarnataka NewsNationalPolitics

*ಶಾಸಕ ಮುನಿರತ್ನ ಎಸ್ಐಟಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜಾತಿನಿಂದನೆ, ಬೆದರಿಕೆ ಕೇಸ್‌ಗೆ ಸಂಬಂಧಪಟ್ಟಂತೆ ಹೆಚ್ಚಿನ ತನಿಖೆಗಾಗಿ ಮುನಿರತ್ನರವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

ಜಾತಿನಿಂದನೆ ಪ್ರಕರಣದಲ್ಲಿ ಬೇಲ್ ಸಿಕ್ಕಿದ್ದರೂ ಕೂಡಾ ಅತ್ಯಾಚಾರ ಆರೋಪದ ಕೇಸ್‌ನಲ್ಲಿ ಮತ್ತೆ ಪೊಲೀಸರ ವಶದಲ್ಲಿದ್ದ ಮುನಿರತ್ನ ಇದೀಗ ಎಸ್‌ಐಟಿ ಪೊಲೀಸರ ವಶವಾಗಿದ್ದಾರೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನ ಅವರನ್ನು ಬಂಧಿಸಿದ್ದರು. ನಂತರ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಪೊಲೀಸರು ಮುನಿರತ್ನ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು.

ಈ ನಡುವೆ ಸರ್ಕಾರ, ಮುನಿರತ್ನ ವಿರುದ್ಧ ವೈಯಾಲಿ ಕಾವಲ್ ಠಾಣೆಯಲ್ಲಿ ದಾಖಲಾಗಿದ್ದ ಸುಲಿಗೆ, ಜೀವ ಬೆದರಿಕೆ, ಜಾತಿನಿಂದನೆ ಹಾಗೂ ಕಗ್ಗಲೀಪುರ ಠಾಣೆಯ ಅತ್ಯಾಚಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿತ್ತು. ಈ ಮೂರೂ ಪ್ರಕರಣಗಳಿಗೆ ಸಂಬಂಧಪಟ್ಟ ಕಡತ ಹಾಗೂ ದಾಖಲೆಗಳನ್ನು ಪೊಲೀಸರು ಈಗಾಗಲೇ ಎಸ್‌ಐಟಿಗೆ ಹಸ್ತಾಂತರಿಸಿದ್ದು, ಇಂದು ಮುನಿರತ್ನರವರನ್ನು ವಿಶೇಷ ತನಿಖಾ ತಂಡದ ಪೊಲೀಸರು ಹೆಚ್ಚುವರಿ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button