Politics

*ಜನಾರ್ಧನ ರೆಡ್ಡಿ ಕಾರು ಸೀಜ್ ಮಾಡಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಜನಾರ್ಧನ ರೆಡ್ಡಿ ಅವರಿಗೆ ಸೇರಿದ ರೇಂಜ್ ರೋವರ್ ಕಾರನ್ನು ಬೆಂಗಳೂರಿನಲ್ಲಿ ಜಪ್ತಿ ಮಾಡಿರುವ ಗಂಗಾವತಿ ಠಾಣೆ ಪೊಲಿಸರು, ಗಂಗಾವತಿಗೆ ತೆಗೆದುಕೊಂಡು ಹೋಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನಕ್ಕೆ ಎದುರಾಗಿ ಶಾಸಕ ಜನಾರ್ಧನ ರೆಡ್ಡಿ ಕಾರು ಚಲಾಯಿಸಿ ಕಾನ್ವೆ ರೂಲ್ಸ್ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರತ ಪೊಲೀಸರು ಜನಾರ್ಧನ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದರು. ಅಂದು ಸ್ವತಃ ಜನಾರ್ಧನ ರೆಡ್ಡಿ ಅವರೇ ಕಾರನ್ನು ಡಿವೈಡರ್ ಮೇಲೆ ಚಲಾಯಿಸಿಕೊಂಡು ಹೋಗಿದ್ದಲ್ಲದೇ ಕಾನ್ವೆ ರೂಲ್ಸ್ ಉಲ್ಲಂಘಿಸಿದ್ದರು ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button