Latest

*ಚರಂಡಿ ನೀರಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ: ಹಾವೇರಿಯಲ್ಲಿ ಚರಂಡಿ ನೀರಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಡರಾತ್ರಿ ಹಾವೇರಿಯಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿವೆ. ಇನ್ನೊಂದೆಡೆ ಎಸ್ ಪಿ ಕಚೇರಿ ಮುಂಭಾಗವೇ ಚರಂಡಿ ನೀರು ಹೊಳೆಯಂತೆ ಹರಿಯುತ್ತಿದೆ. ಇಂದು ಮುಂಜಾನೆ ರಸ್ತೆಯಲ್ಲಿ ಹೋಗುತ್ತಿದ್ದ 12 ವರ್ಷದ ಬಾಲಕ ಕಾಲಿಡುತ್ತಿದ್ದಂತೆಯೇ ಚರಂಡಿಯೊಳಗೆ ಬಿದ್ದು ಕೊಚ್ಚಿ ಹೋಗಿದ್ದಾನೆ. 12 ವರ್ಷದ ಬಾಲಕ ನಿವೇದನ್ ಚರಂಡಿಯಲ್ಲಿ ಕೊಚ್ಚಿ ಹೋಗಿರುವ ಬಾಲಕ.

ಘಟಾನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬಾಲಕನನ್ನು ಪತ್ತೆ ಮಾಡಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ.

Home add -Advt

Related Articles

Back to top button