Belagavi NewsBelgaum NewsKannada NewsKarnataka News

*ಘಟಪ್ರಭಾ ನದಿಗೆ ಬಿದ್ದ ಬೈಕ್: ದಂಪತಿ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೈಕ್‌ ಮೇಲೆ ದಂಪತಿ ಹೋಗುತ್ತಿದ್ದಾಗ ಸ್ಕಿಡ್ ಆಗಿ ನದಿಗೆ ಬಿದ್ದು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗಣಿಹಾಳ ಗ್ರಾಮದಲ್ಲಿ ಇಂದು ಸಂಭವಿಸಿದೆ.

ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆದ ಪರಿಣಾಮ ಘಟಪ್ರಭಾ ನದಿಗೆ ಬಿದ್ದಿದೆ. ಈ ದುರಂತದಲ್ಲಿ ಸುರೇಶ್ ಬಡಿಗೇರ ಮತ್ತು ಪತ್ನಿ ಜಯಶ್ರೀ ಬಡಿಗೇರ ಎಂಬುವ ದಂಪತಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಜಯಶ್ರೀ ಎಂಬುವವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಇನ್ನು ಸುರೇಶ್ ಬಡಿಗೇರ ಅವರ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button