Politics

*ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ: HDK ಆತ್ಮವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಹೆಳುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ 3ನೇ ಬಾರಿ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, 2028ರವರೆಗೆ ಈ ಸರ್ಕಾರ ನಡೆಯಲ್ಲ. ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಈಗಿನ ಪರಿಸ್ಥಿತಿ ನೋಡಿದರೆ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಈ ಸರ್ಕಾರವನ್ನು 2028ರವರೆಗೆ ಎಳೆಯಲಾಗದು. ಮತ್ತೆ ನಾನೇ ರಾಜ್ಯದ ಸಿಎಂ ಆಗಲಿದ್ದೇನೆ. ಜನರು ಬಯಸಿದರೆ ಮತ್ತೆ ಯಾಕೆ ನಾನೇ ಸಿಎಂ ಆಗಬಾರದು? ಜನರು ಮತ್ತೆ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button