Belagavi NewsBelgaum NewsPolitics

*ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಪರ ಕೆಲಸಗಳು ಆಗುತ್ತಿಲ್ಲ: ಶ್ರೀಮಂತ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಪರ ಕೆಲಸ ಆಗುತ್ತಿಲ್ಲ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಶ್ರಿಮಂತ ಪಾಟೀಲ್ ಆಕ್ರೋಶ ಹೊರ ಹಾಕಿದ್ದಾರೆ.‌

ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗುತ್ತಿಲ್ಲ. ಕಳೆದ ಒಂದೂವರೆ ವರ್ಷದಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಬಸವೇಶ್ವರ ಏತ ನೀರಾವರಿ ಯೋಜನೆಗೂ ಸಹ ಅನುದಾನ ಸಿಕ್ಕಿಲ್ಲ. ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಹತ್ವದ ನೀರಾವರಿ ಯೋಜನೆ ಇದಾಗಿದೆ. ಸುಮಾರು 25 ಸಾವಿರೂ ಎಕರೆಗೆ ನೀರಾವರಿ ಒದಗಿಸುವ ಯೋಜನೆಯಿದಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಆಗದೇ ಇರೋದಕ್ಕೆ ಪಂಚ ಗ್ಯಾರಂಟಿಗಳೇ ಕಾರಣ ಎಂದು ಮಾಜಿ ಶ್ರೀಮಂತ ಪಾಟೀಲ್ ಹೇಳಿದರು.

Home add -Advt

Related Articles

Back to top button