Karnataka News

*ಬಸ್ ಹಾಗೂ ಬೈಕ್ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ್ ಟಾಕೀಸ್ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಬಸ್ ದಂಪತಿ ಮೇಲೆ ಹರಿದು ಹೋಗಿದೆ. ಕೊಮ್ಮಸಂದ್ರ ಗ್ರಾಮದ ವೆಂಕಟೇಶ್ (40) ಹಾಗೂ ಪತ್ನಿ ಸರಸ್ವತಮ್ಮ (34) ಮೃತ ದುರ್ದೈವಿಗಳು.

Home add -Advt

ಸರಸ್ವತಮ್ಮ ಪತಿ ವೆಂಕಟೇಶ್ ಜೊತೆ ತವರುಮನೆಗೆಂದು ತೆರಳುತ್ತಿದ್ದರು. ಈ ವೇಳೆ ದಂಪತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಚಿಂತಾಮಣಿ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button