Latest

*ಸಾಮೂಹಿಕ ಹತ್ಯೆಗೆ ಯತ್ನ: ಮನೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕುಟುಂಬವೊಂದನ್ನು ಸಾಮೂಹಿಕವಾಗಿ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಕಡಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುಂಡೇರಾವ್ ಕುಟುಂಬದವರ ಹತ್ಯೆಗೆ ಶಿವಲಿಂಗಪ್ಪ ಕರಿಕಲ್ ಯತ್ನಿಸಿದ್ದಾರೆ. ಗುಂಡೇರಾವ್ ಮನೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಘಟನೆ ವೇಳೆ 6-7 ಜನರು ಮನೆಯಲ್ಲಿದ್ದರು.

ಬೆಂಕಿ ಹಚ್ಚುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಮನೆ ಬಾಗಿಲು ಮುರಿದು ಕುಟುಂಬದವರನ್ನು ರಕ್ಷಿಸಿದ್ದಾರೆ. ಗಾಯಗೊಂಡಿರುವವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮನೆ ಭಾಗಶಃ ಸುತ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಫರಹತಾಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Home add -Advt

Related Articles

Back to top button