Karnataka News

*ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ: ಸಿಎಂ ಒಪ್ಪಿಗೆ; ಕಡತ ಮಂಡಿಸಲು ಸೂಚನೆ*

ನಗರಾಭಿವೃದ್ದಿ ಸಚಿವರಿಗೆ ಮನವಿ

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪತ್ಯೇಕಿಸಿ 2 ಮಹಾನಗರ ಪಾಲಿಕೆಗಳನ್ನಾಗಿ ಮಾಡುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ. ಎಸ್.‌ ಸುರೇಶ (ಬೈರತಿ) ಸಮ್ಮುಖದಲ್ಲಿ ಸಭೆ ಜರುಗಿತು.

ಧಾರವಾಡ ಕ್ಷೇತ್ರದ ಶಾಸಕರಾದ ವಿನಯ್‌ ಕುಲಕರ್ಣಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರ ನಿಯೋಗದೊಂದಿಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶರವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸುವ ಸಂಬಂಧ ಮುಂದಿನ ಸಚಿವ ಸಂಪುಟಕ್ಕೆ ಕಡತವನ್ನು ಮಂಡಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸೂಚಿಸಿದರು.

Home add -Advt

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಮತ್ತು ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಗಳನ್ನಾಗಿ ಮಾಡಲು ಸಮ್ಮತಿಸಿದ್ದು, ಈಗಾಗಲೇ ಸಂಬಂಧಪಟ್ಟವರಿಗೆ ಮೌಖಿಕವಾಗಿ ಸೂಚನೆಯನ್ನು ನೀಡಿದ್ದಾರೆ ಎಂದು ಬೈರತಿ ಸುರೇಶ ಅವರು ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ತಿಳಿಸಿದರು.

Related Articles

Back to top button