Belagavi NewsBelgaum News

*ಬೆಳಗಾವಿಯಲ್ಲಿ ಮತ್ತೆ ತೀವ್ರಗೊಂಡ ಪಂಚಮಸಾಲಿ ಪ್ರತಿಭಟನೆ: ಹೆದ್ದಾರಿ ತಡೆದು ಹೋರಾಟಗಾರರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ.

ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.

ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಪಂಚಾಸಾಲಿ ಸಮುದಾಯದವರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ.

Home add -Advt

Related Articles

Back to top button