Belagavi NewsBelgaum News

*ಬೆಳಗಾವಿ ಡಿಸಿ ಕಚೇರಿ ಬಳಿ ಪಂಚಾಮಸಾಲಿ ಹೋರಾಟಕ್ಕೆ ತಡೆ: ಸರ್ಕಾರದ ವಿರುದ್ಧ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷಮೆ ಕೋರುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿ ಡಿಸಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದರು.

ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪಂಚಮಸಾಲಿ ಹೋರಾಟಕ್ಕೆ ಅವಕಾಶ ನೀಡಿಲ್ಲ. ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿಗೆ ಅವಕಶವಿಲ್ಲ ಎಂದಿದ್ದಾರೆ. ಇದರಿಂದ ಹೋರಾಟಗಾರರು ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಇನ್ನಷ್ಟು ಆಕ್ರೋಶ ವ್ಯಕ್ತಪಡಿಸಿವೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹೋರಾಟ ತಡೆಯುವುದು ಅವರ ಹವ್ಯಾಸ, ಆದರೆ ಹೋರಾಟ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

Home add -Advt

ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಡಿರುವ ಪೊಲೀಸರ ಕ್ರಮ ಖಂದನೀಯ. ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು. ಅಲ್ಲದೇ ಲಾಠಿ ಚಾರ್ಜ್ ಮಾಡಿರುವ ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದರು.

Related Articles

Back to top button