Politics

*ಶಾಸಕ ಮುನಿರತ್ನ ತಲೆಗೆ ಪೆಟ್ಟು ಬಿದ್ದಿದೆ: ಸಂಸದ ಡಾ.ಮಂಜುನಾಥ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಡಾ.ಮಂಜುನಾಥ್, ಮುನಿರತ್ನ ತಲೆ ಹಿಂಭಾಗ ಪೆಟ್ಟು ಬಿದ್ದಿದೆ ಎಂದು ತಿಳಿಸಿದ್ದಾರೆ.

ಮೊಟ್ಟೆ ದಾಳಿ ಘತನೆ ಬಳಿಕ ಶಾಸಕ ಮುನಿರತ್ನ, ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಾ.ಮಂಜುನಾಥ್, ಮುನಿರತ್ನ ತಲೆಯ ಹಿಂಭಾಗದಲ್ಲಿ ಪೆಟ್ಟು ಬಿದ್ದಿದೆ. ಕೆಮಿಕಲ್ ಮಾದರಿ ಪದಾರ್ಥದಿಂದ ಹೊಡೆದಿದ್ದಾರೆ. ಅವರ ಕೂದಲು ಸ್ವಲ್ಪ ಬರ್ನ್ ಆಗಿದೆ ಎಂದು ತಿಳಿಸಿದ್ದಾರೆ.

ಮುನಿರತ್ನ ಅವರಿಗೆ ತಲೆಸುತ್ತು, ವಾಂತಿ ಬಂದಂತೆ ಆಗ್ತಿದೆ, ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಸಿಟಿ ಸ್ಕ್ಯಾನ್ ಮಾಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button