Politics

*ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಪಾಂಚಾಳ ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಬಿಜೆಪಿ ನಾಯಕರ ಹತ್ಯೆಗೂ ಸುಪಾರಿ ನೀಡಲಾಗಿದೆ ಎಂದು ಬರೆಯಲಾಗಿತ್ತು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಹಾಗೂ ಗ್ಯಾಂಗ್ ನ್ನು ಬಂಧಿಸುವಂತೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು.

Home add -Advt

ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ರಾಜು ಕಪನೂರ ಸೇರಿ 6 ಜನರ ವಿರುದ್ಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button