Belagavi NewsBelgaum NewsKarnataka News

*ಬಸ್ ದರ ಏರಿಕೆ ಖಂಡಿಸಿ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಪ್ರತಿಭಟಿಸಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಹಾಗೂ ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಸ್ ಡಿಎ ನೌಕರ ರುದ್ರೇಶ್ ಯಡವಣ್ಣವರ ತನಿಖೆ ಸಿಬಿಐಗೆ ನೀಡಿಬೇಕು ಹಾಗೂ ಬಸ್ ದರ ಏರಿಕೆ ಖಂಡಿಸಿ ಪ್ರತಿಭಟಿಸಿಲಾಯಿತು. 

ಇಂದು ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು. ಗುತ್ತಿಗೆದಾರರ ಸಚಿನ್ ಆತ್ಮಹತ್ಯೆ ಮಾಡುವ ಮುನ್ನ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಮುಖ್ಯಮಂತ್ರಿಗಳು ಸಚಿವ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು. ಇನ್ನೂ ಬೆಳಗಾವಿಯಲ್ಲಿ ಎಸ್ ಡಿಎ ನೌಕರ ರುದ್ರೇಶ್ ಯಡವಣ್ಣವರ ತಹಶಿಲ್ದಾರ ಕಚೇರಿಯಲ್ಲಿಯೇ ಸಚಿವೆ ಹೆಬ್ಬಾಳ್ಳ‌ರ್ ಆಪ್ತನ ಹೆಸರು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕಣದ ಪ್ರಮುಖ ಆರೋಪಿ ತಹಶಿಲ್ದಾರ ಬಸವರಾಜ ನಾಗರಾಳ ಜಾಮೀನು ಪಡೆದು ರಾಜಾರೋಷವಾಗಿ ಕಚೇರಿಗೆ ಬರುತ್ತಿದ್ದಾರೆ. ಅವರ ಮೇಲೂ ಕ್ರಮ ಜರುಗಿಸಿಲ್ಲ. ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಸರಕಾರದಲ್ಲಿ ಅಧಿಕಾರಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದು ನಿಲ್ಲಬೇಕು ಎಂದು ಒತ್ತಾಯಿಸಿದರು. ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂವುಗಳನ್ನು ನೀಡಿ ವಿನೂತನವಾಗಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. 

Home add -Advt

Related Articles

Back to top button