![](https://pragativahini.com/wp-content/uploads/2023/08/H.K.Patil_.jpg)
ಪ್ರಗತಿವಾಹಿನಿ ಸುದ್ದಿ : ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು ಇದರ ನಡುವೆಯೇ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಹತ್ವದ ಸುಳಿವನ್ನು ನೀಡಿದ್ದಾರೆ.
ಸಂಪುಟ ಪುನರ್ ರಚನೆ ಬಗ್ಗೆ ಹೈಕಮಾಂಡ್ಗೂ ಅನಿಸಿದೆ ಎಂದು ಹೇಳುವ ಮೂಲಕ ಸಂಪುಟ ಸರ್ಜರಿ ಪಕ್ಕಾ ಎಂಬ ಮಹತ್ವದ ಸುಳಿವು ಬಿಟ್ಟುಕೊಟ್ಟಿದ್ದಾರೆ. ಬಹುತೇಕ ಸಂಕ್ರಾಂತಿ ನಂತರ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ತದನಂತರ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟವಾಗುವ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆಯೂ ಇದೆ.
ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರು ಸಂಪುಟಕ್ಕೆ ಸೇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಅತ್ತ ಸಚಿವ ಕೆ.ಎನ್ ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಆ ಹುದ್ದೆಗಾಗಿ ತಾವು ಸಚಿವ ಸ್ಥಾನವನ್ನೂ ತೇಜಿಸಲು ಸಿದ್ಧ ಎಂದು ಈ ಹಿಂದೆ ಹೇಳಿದ್ದು ವರದಿಯಾಗಿತ್ತು. ಇನ್ನು ವಕ್ಸ್ ಬೋರ್ಡ್ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಹೆಸರು ರಾಜ್ಯ ರಾಜಕಾರಣದಲ್ಲಿ ವಿವಾದ ಸುಳಿಗೆ ಸಿಲುಕಿದ್ದ ಕಾರಣಕ್ಕೆ ಅವರಿಗೆ ಹೈಕಮಾಂಡ್ ಕೋಕ್ ನೀಡಬಹುದು ಹಾಗೂ ಎಮ್ಎಲ್ ಸಿ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಕೆಲ ಹೊಸಬರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಯೂ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ