Politics

*ರಮೇಶ್ ಜಾರಕಿಹೊಳಿ ವಿರುದ್ಧ ಪ್ರಹ್ಲಾದ್ ಜೋಷಿ ಗರಂ*

ಪ್ರಗತಿವಾಹಿನಿ ಸುದ್ದಿ: ರಮೇಶ್ ಜಾರಕಿಹೊಳಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು, ಅವರ ಪದ ಬಳಕೆಯನ್ನು ಒಪ್ಪಲಾಗದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತಾಡಿದ ಅವರು, ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಆ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಇದನ್ನು ಯಾರೂ ಮರೆಯಬಾರದು. ಶಾಸಕರೊಬ್ಬರು ಈ ರೀತಿ ಮಾತನಾಡಿರುವುದು ತಪ್ಪು. ಇದನ್ನು ಒಪ್ಪಲಾಗದು ಎಂದು ತಿಳಿಸಿದ್ದಾರೆ.

Home add -Advt

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ರಮೇಶ್ ಜಾರಕಿಹೊಳಿ, ವಿಜಯೇಂದ್ರ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ಅವನಿಗೆ ನಾನು ಎಚ್ಚರಿಕೆ ಕೊಡುತ್ತೇನೆ. ನೀನು ಇನ್ನೂ ಬಚ್ಚಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಲು ಯೋಗ್ಯನಲ್ಲ ಎಂದು ಹೇಳಿದ್ದರು.

ನಾನು ನಿಮ್ಮ ಅಪ್ಪನನ್ನು ಮುಖ್ಯಮಂತ್ರಿ ಮಾಡುವ ಸಲುವಾಗಿ ಬಿಜೆಪಿಗೆ ಬಂದಿದ್ದೇನೆ ವಿಜಯೇಂದ್ರ. ನನ್ನ ಕ್ಷೇತ್ರದ ಜನ ನನ್ನೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ಯಾರ ಭಯವೂ ಇಲ್ಲ. ನನಗೆ ಯಡಿಯೂರಪ್ಪ ಬಗ್ಗೆ ಅಪಾರ ಗೌರವವಿದೆ. ಈಗಲೂ ಅವರೇ ನಮ್ಮನಾಯಕ. ಆದರೆ, ನಾಯಕನಾಗುವ ಯೋಗ್ಯತೆ ವಿಜಯೇಂದ್ರಗೆ ಇಲ್ಲ. ಅದಕ್ಕಾಗಿಯೇ ಅವನನ್ನು ಕೆಳಗಿಳಿಸಲು ಹೋರಾಡುತ್ತಿದ್ದೇವೆ ಎಂದು ಏಕವಚನದಲ್ಲೇ ಮಾತಾಡಿದ್ದರು.

ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ರಾಜ್ಯದಲ್ಲಿ ಓಡಾಡುವುದು ಕಷ್ಟವಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾನೆ. ನಾನು ನೇರಾನೇರ ಸವಾಲ್ ಹಾಕುತ್ತಿದ್ದೇನೆ . ವಿಜಯೇಂದ್ರ ನೀನು ದಿನಾಂಕ ಫಿಕ್ಸ್ ಮಾಡಿ ಹೇಳು. ಶಿಕಾರಿಪುರದಲ್ಲೇ ಪ್ರವಾಸ ಮಾಡುತ್ತೇನೆ. ನಾನು ರಕ್ಷಣೆಗೆ ಪೊಲೀಸ್ ಪಡೆ ಅಥವಾ ಗನ್ ತರುವುದಿಲ್ಲ. ಒಬ್ಬನೇ ಬರುತ್ತೇನೆ. ಆ ತಾಕತ್ತು ನನಗಿದೆ. ಆದರೆ, ನಿನ್ನನ್ನು ರಾಜ್ಯದಲ್ಲಿ ಓಡಾಡದ ಹಾಗೆ ಮಾಡುವ ತಾಕತ್ತನ್ನೂ ದೇವರು ನನಗೆ ಕೊಟ್ಟಿದ್ದಾನೆ ಎಂದು ರಮೇಶ್ ಜಾರಕಿಹೊಳಿ ಸವಾಲ್ ಹಾಕಿದ್ದಾರೆ.

Related Articles

Back to top button