ಪ್ರಗತಿವಾಹಿನಿ ಸುದ್ದಿ : ನವೆಂಬರ್ ನಲ್ಲಿ ಸಿಎಂ ಬದಲವೆಯಾಗಲಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನವೆಂಬರ್ ತಿಂಗಳಲ್ಲಿ ಸಿದ್ದರಾಮಯ್ಯ ಸ್ಥಾನವನ್ನು ಡಿ.ಕೆ ಶಿವಕುಮಾರ್ ಆಕ್ರಮಿಸಲಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತ ಚರ್ಚೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರೂ ಅದೆಲ್ಲದರ ಹೊರತಾಗಿಯೂ ಕಾಂಗ್ರೆಸ್ ಪಾಳಯದಲ್ಲಿಯೂ ಚರ್ಚೆ ನಡೆಯುತ್ತಿದೆ, ವಿಪಕ್ಷಗಳು ಸಹ ವಿಷಯ ಕೆದಕುತ್ತಿವೆ.
ನವೆಂಬರ್ ಗೆ ಎರಡೂವರೆ ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಅಶೋಕ ಈ ರೀತಿ ಮಾತನಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ