![](https://pragativahini.com/wp-content/uploads/2024/02/bjp-workers-.jpg)
ಪ್ರಗತಿವಾಹಿನಿ ಸುದ್ದಿ: ದೆಹಲಿಯ ನೂತನ ಸಿಎಂ ಯಾರಾಗುತ್ತಾರೆ ಎಂಬ ಕುತೂಹಲದ ನಡುವೆ, ಇದೇ ಫೆಬ್ರವರಿ 19 ಅಥವಾ 20 ರಂದು ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಬಹುದು ಎಂದು ಹೇಳಲಾಗುತ್ತಿದೆ.
ಪ್ರಮಾಣವಚನ ಸ್ವೀಕಾರಕ್ಕೆ ಒಂದು ದಿನ ಮೊದಲು ಬಿಜೆಪಿ ಶಾಸಕಾಂಗ ಪಕ್ಷ ನಡೆಯುವ ಸಾಧ್ಯತೆಯಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ, ಬಹುಶಃ ಒಬ್ಬರು ಅಥವಾ ಇಬ್ಬರು ಅವರ ಉಪನಾಯಕರು ಮತ್ತು ಮಂತ್ರಿಮಂಡಲ ರಚಿಸಬಹುದು.
ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರಜ ಮಾತನಾಡಿದ್ದು, ಪಕ್ಷದ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಹೆಸರನ್ನು ಘೋಷಿಸುವ ಮೊದಲು ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಚರ್ಚಿಸಲು ವೀಕ್ಷಕರನ್ನು ನೇಮಿಸುತ್ತದೆ. ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇದೆ ಎಂಬ ವರದಿಗಳನ್ನು ಬಿಜೆಪಿಯ ಹಿರಿಯ ನಾಯಕರು ತಳ್ಳಿಹಾಕಿದ್ದು, ಅವೆಲ್ಲ ಕೇವಲ ಊಹಾಪೋಹವಷ್ಟೆ ಎಂದಿದ್ದಾರೆ.
ಮುಖ್ಯಮಂತ್ರಿ ಹುದ್ದೆಗೆ ಯಾವುದೇ ಪೈಪೋಟಿ ಇಲ್ಲ. ನಮ್ಮ ಪಕ್ಷದಲ್ಲಿ, ಸಿಎಂ ಅಥವಾ ಶಾಸಕಾಂಗ ಪಕ್ಷದ ನಾಯಕನನ್ನು ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ನಾವು ಅಭಿವೃದ್ಧಿ, ಜನರಿಗೆ ಶುದ್ಧ ನೀರು ಮತ್ತು ಗಾಳಿಯನ್ನು ಒದಗಿಸುವುದಕ್ಕೆ ಆದ್ಯತೆ ನೀಡುತ್ತೇವೆ. ಯಮುನಾ ನೀರನ್ನು ಮಾಲಿನ್ಯ ಮುಕ್ತಗೊಳಿಸಲು ನಾವು ಕೆಲಸ ಮಾಡುತ್ತೇವೆ. ಪ್ರಧಾನಿಯವರ ಭರವಸೆಯಂತೆ, ಎಎಪಿ ಸರ್ಕಾರದಿಂದ ಅಡ್ಡಿಪಡಿಸಲ್ಪಟ್ಟ ಆಯುಷ್ಮಾನ್ ಭಾರತ್ ಯೋಜನೆಯನ್ನು ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಜಾರಿಗೆ ತರಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ