Belagavi NewsBelgaum News
*ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ: ಮತ್ತೋರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮರಾಠಿ ಬರಲ್ಲ, ಕನ್ನಡ ಮಾತನಾಡಿ ಎಂದಿದ್ದಕ್ಕೆ ಎಂಇಎಸ್ ಪುಂದರು ಕಂದಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಮಹದೇವಪ್ಪ ದೂರು ದಾಖಲಿಸಿದ್ದರು. ನಿನ್ನೆ ಮಾರಿಹಾಳ ಠಾಣೆ ಪೊಲೀಸರು ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದರು.
ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೋಹನ್ ಹಂಚಿನಮನಿ (25) ಎಂದು ಗುರುತಿಸಲಾಗಿದೆ.




