Kannada NewsKarnataka NewsLatest

*ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ*

ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. 

Home add -Advt

ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ RSS ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವದನ್ನು ಉಲ್ಲೇಖಿಸಿದರು.

ತಾಲ್ಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು. 

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು.

Related Articles

Back to top button