Karnataka News

*ವಿದ್ಯಾರ್ಥಿನಿಯರ ಮೇಲೆ ಕೆಮಿಕಲ್ ಮಿಶ್ರಿತ ಬಣ್ಣ ಎರಚಿದ ಕಿಡಿಗೇಡಿಗಳು*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರ ಮೇಲೆ ಕಿಡಿಗೇಡಿಗಳು ಕೆಮಿಕಲ್ ಮಿಶ್ರಿತ ಬಣ್ಣ ಎರಚಿದ ಘಟನೆ ಗದಗದಲ್ಲಿ ನಡೆದಿದೆ.

Home add -Advt

ನಾಲ್ವರು ವಿದ್ಯಾರ್ಥಿನಿಯರ ಮೇಲೆ ಕಿಡಿಗೇಡಿಗಳ ಗುಂಪು ಕೆಮಿಕಲ್ ಮಿಶ್ರಿತ ಬಣ್ಣ ಎರಚಿದ್ದು, ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಸುವರ್ಣಗಿರಿ ತಾಂಡಾ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಗೌರಿ ಪೂಜಾರ, ದಿವ್ಯಾ ಲಮಾಣಿ, ಅಂಕಿತಾ ಲಮಾಣಿ ತನುಷಾ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು. ಉಸಿರಾಟದ ತೊಂದರೆ, ಎದೆನೋವಿನಿಂದ ವಿದ್ಯಾರ್ಥಿನಿಯರು ನರಳಾಡುತ್ತಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ಲಕ್ಷ್ಮೀಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button