Belagavi NewsBelgaum NewsKarnataka News

*ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಅಂಬ್ಯುಲನ್ಸ್ ಗೆ ಚಾಲನೆ ನೀಡಿದ ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರಕ್ಕೆ ಯುನಿಯನ್ ಬ್ಯಾಂಕ ಆಫ್ ಇಂಡಿಯಾ ನೀಡಿದ ನೂತನ ಅಂಬ್ಯುಲನ್ಸ್ ಅನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಂದಿಲ್ಲಿ ಹಸಿರು ನಿಶಾನೆ ತೋರುವದರ ಮೂಲಕ ಜನಸೇವೆಗೆ ಅರ್ಪಿಸಿದರು.

ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ತುರ್ತು ಆರೋಗ್ಯ ಸೇವೆಯನ್ನು ಕಲ್ಪಿಸುವಲ್ಲಿ ಅಂಬ್ಯುಲನ್ಸ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಸುವರ್ಣ ಘಳಿಗೆಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಆರೋಗ್ಯ ಸೇವೆಯನ್ನು ಎಲ್ಲರಿಗೂ ತಲುಪಿಸಲು ಸಾಕಷ್ಟು ಯೋಜನೆ ರೂಪಿಸಿದರೂ ಕೂಡ ಕೆಲವು ತುರ್ತು ಸಂದರ್ಭಗಳಲ್ಲಿ ಅಂಬ್ಯುಲನ್ಸ ಆಸ್ಪತ್ರೆಯ ಕಾರ್ಯವನ್ನು ಮಾಡುತ್ತದೆ. ಆದ್ದರಿಂದ ತುರ್ತು ಸಂದರ್ಭಗಳಲ್ಲಿ ಅನುಕೂಲವಾಗುವಂತೆ ಸಂಘಸಂಸ್ಥೆಗಳು ಕೈಜೋಡಿಸುವಂತೆ ಕರೆ ನೀಡಿದರು.

ಕೆಎಲ್ಇ ಸಂಸ್ಥೆಯ ಆಸ್ಪತ್ರೆಗಳು ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಲು ಸದಾ ಕಟಿಬದ್ದವಾಗಿವೆ. ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಒಂದೇ ಸೂರಿನಡಿ ಸಕಲ ಆರೋಗ್ಯ ಸೇವೆಯನ್ನು ಕಲ್ಪಿಸಲಾಗುತ್ತಿದೆ. ಕ್ಯಾನ್ಸರ ಆಸ್ಪತ್ರೆಯನ್ನೂ ಕೂಡ ಜನಸೇವೆಗೆ ಅರ್ಪಿಸಲಾಗಿದೆ ಎಂದರು.

ಯುನಿಯನ್ ಬ್ಯಾಂಕನ ಪ್ರಾದೇಶಿಕ ಮುಖ್ಯಸ್ಥರಾದ ಆರತಿ ರೌರ್ನಿಯಾರ ಅವರು ಮಾತನಾಡಿ, ತುರ್ತು ವೈದ್ಯಕೀಯ ಸೇವೆಗಳನ್ನು ಸುಧಾರಿಸಲು ಯುನಿಯನ್ ಬ್ಯಾಂಕ ಆಫ್ ಇಂಡಿಯಾ ಕೆಎಲ್‌ಇ ಸಂಸ್ಥೆಯ ಆಸ್ಪತ್ರೆಗಳಿಗೆ ಸಹಕಾರ ನೀಡುತ್ತಿವೆ. ಈ ಅತ್ಯಾಧುನಿಕ ಆಂಬ್ಯುಲೆನ್ಸ್ ರೋಗಿಗಳನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸಿದರು.

Home add -Advt

ಈ ಸಂದರ್ಭದಲ್ಲಿ ಕಾಹೆರನ ಉಪಕುಲಪತಿ ಡಾ. ನಿತಿನ ಗಂಗಾನೆ, ಡಾ. ಹೆಚ್ ಬಿ ರಾಜಶೇಖರ, ಡಾ. ವಿ ಡಿ ಪಾಟೀಲ, ರಜಿಸ್ಟ್ರಾರ ಎಸ್ ಎಸ್ ಗಣಾಚಾರಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ, ಉಪಪ್ರಾಚಾರ್ಯರಾದ ಡಾ. ರಾಜೇಶ ಪವಾರ, ಡಾ. ವಿಶ್ವನಾಥ ಪಟ್ಟಣಶೆಟ್ಟಿ, ಡಾ. ಆರಿಫ್ ಮಾಲ್ದಾರ, ಕೆಎಲ್‌ಇ ಸಂಸ್ಥೆಯ ಬ್ಯಾಂಕಿಂಗ್ ವ್ಯವಹಾರಗಳ ನಿರ್ದೇಶಕರಾದ ಬಸವರಾಜ ಜೇವರಗಿಕರ, ಯುನಿಯನ್ ಬ್ಯಾಂಕನ ಪ್ರಾದೇಶಿಕ ಮುಖ್ಯಸ್ಥರಾದ ಆರತಿ ರೌರ್ನಿಯಾರ, ಉಪಮುಖ್ಯಸ್ಥ ಗ್ಯಾನೇಶಕುಮಾರ, ಮನಿಷ ಮೇಘನ್ನವರ, ಮುಖ್ಯ ನಿರ್ವಾಹಕರಾದ ನಾಗರಾಜ ಪಾಟೀಲ, ನಿರ್ವಾಹಕ ವೇದಪ್ರಕಾಶ, ನಿಖಿಲ ಭಸ್ಮೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button