Belagavi NewsBelgaum News

*ಬೆಳಗಾವಿಯ ಮೊರಬ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಘಟಕ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣದಿಂದ) ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೊರಬ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಘಟಕವನ್ನು ಜಿಲ್ಲಾಧ್ಯಕ್ಷರಾದ ಆರ್ ಅಭಿಲಾಷ್ ಉದ್ಘಾಟಿಸಿದರು.

Home add -Advt

ಮೊದಲು ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ತಾಯಿ ಭುವನೇಶ್ವರಿ ಫೋಟೋ ಪೂಜೆ ಮಾಡುವ ಮೂಲಕ ಕರವೇ ಗ್ರಾಮ ಘಟಕವನ್ನು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷರಾದ ಅಭಿಲಾಷ್ ಅವರು ಕನ್ನಡವನ್ನು ಹೆಚೆಚ್ಚು ಬಳಸಿ ಹಾಗೂ ಎಲೆಲ್ಲೂ ಕನ್ನಡತನವನ್ನು ಕಟ್ಟುವ ಕೆಲಸ ಮಾಡಬೇಕೆಂದು ಕರೆ ಕೊಟ್ಟರು.

ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ್, ಗ್ರಾಮ ಪಂಚಾಯತ್ ಸದಸ್ಯರಾದ ನದಾಫ್, ಕರವೇ ತಾಲೂಕಾಧ್ಯಕ್ಷರಾದ ರಾಕೇಶ್, ಕರವೇ ಮೊರಬ ಗ್ರಾಮಧ್ಯಕ್ಷರಾದ ಚೇತನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Back to top button