Kannada NewsKarnataka NewsNational

*ತುಮಕೂರು ರೈಲು ನಿಲ್ದಾಣ ಸದ್ಯದಲ್ಲೇ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ರೈಲು ನಿಲ್ದಾಣ?*

ಪ್ರಗತಿವಾಹಿನಿ ಸುದ್ದಿ: ತುಮಕೂರಿನ ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಸ್ವಾಮೀಜಿ ಅವರ ಹೆಸರಿಡುವ ಪ್ರಸ್ತಾವನೆ ಕುರಿತು ಸರ್ಕಾರ ಒಪ್ಪಿಗೆಯನ್ನು ಸೂಚಿಸಿದೆ. 

ಅಲ್ಲದೇ ರೈಲು ನಿಲ್ದಾಣಕ್ಕೆ ಹೆಸರಿಡುವ ಬಗ್ಗೆ ಒಪ್ಪಿಗೆ ಸೂಚಿಸಿರುವ ಕುರಿತು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು ರೈಲು ನಿಲ್ದಾಣ ಸದ್ಯದಲ್ಲೇ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ರೈಲು ನಿಲ್ದಾಣವೆಂದು ಮರುನಾಮಕರಣವಾಗುವ ಭರವಸೆ ಇದೆ.

Home add -Advt

ರಾಜ್ಯ ಸರ್ಕಾರದ ಒಪ್ಪಿಗೆ ಕುರಿತಾಗಿ ಮೂಲಸೌಲಭ್ಯ ಅಭಿವೃದ್ಧಿ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ಮಂಜುಲಾ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button