Politics

*ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ*

ಪ್ರಗತಿವಾಹಿನಿ ಸುದ್ದಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ನೋವಿನ ಸಂತಾಪಗಳನ್ನು ಸಲ್ಲಿಸಲು ತೀರ್ಮಾನಿಸಿದೆ.


ಉಗ್ರರ ದಾಳಿಗಳು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು.ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.

Home add -Advt


ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ನಮ್ಮ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Related Articles

Back to top button