
ಪ್ರಗತಿವಾಹಿನಿ ಸುದ್ದಿ: ತಂದೆ ಹಾಗೂ ಮಗಳು ಇಬ್ಬರೂ ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಈ ಘಟನೆ ನಡೆದಿದೆ. ತಂದೆ ನಾಗೇಶ್ ಹಾಗೂ ಮಗಳು ಧನುಶ್ರೀ ಮೃತರು. ಧನುಶ್ರೀ ೬ನೇ ತರಗತಿಯಲ್ಲಿ ಓದುತ್ತಿದ್ದಳು. ಅಪ್ಪ ತೋಟದ ಕೆಲಸಕ್ಕೆ ಹೋಗಿದ್ದ ವೇಳೆ ಮಗಳು ಅಪ್ಪನ ಜೊತೆ ತೋಟಕ್ಕೆ ಹೋಗಿದ್ದಳು. ಈ ವೇಳೆ ಕೆರೆ ನೀರಿನಲ್ಲಿ ಕಾಲು ತೊಳೆಯಲು ಹೋಗಿ ಜಾರಿ ಕೆರೆಗೆ ಬಿದ್ದಿದ್ದಾಳೆ. ಮಗಳು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ತಂದೆ ಆಕೆಯನ್ನು ರಕ್ಷಿಸಲು ನೀರಿಗಿಳಿದಿದ್ದಾರೆ. ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.