Belagavi NewsBelgaum NewsKarnataka News

*ಬೆಳಗಾವಿಯಲ್ಲಿ ಮಹಿಳೆ ಹತ್ಯೆ ಪ್ರಕರಣ: ತಾಯಿ-ಮಗಳು-ಮಗ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ಗೆ ನುಗ್ಗಿ ಮಹಿಳೆಯೊಬ್ಬರನ್ನು ಹತ್ಯೆಗೈದು ದುಷ್ಕರ್ಮಿಗಳು ಪಾರಾರುಯಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಾಯಿ-ಮಗಳು- ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಏ.೨೨ರಂದು ಬೆಳಗಾವಿಯ ಗಣೇಶ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ದಡ್ಡೀಕರ್ ಎಂಬ ಮಹಿಳೆಯ ಹತ್ಯೆಯಾಗಿತ್ತು. ಇದೀಗ ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜ್ಯೋತಿ ಬಾಂದೇಕರ್, ಮಗಳು ಸುಹಾನಿ ಬಾಂದೇಕರ್ ಹಾಗೂ ಜ್ಯೋತಿಯ ಅಪ್ರಾಪ್ತ ಮಗನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ಹಾಗೂ ತನಿಖೆ ದಾರಿ ತಪ್ಪಿಸಲು ಕೊಲೆ ಬಳಿಕ ಮಹಿಳೆಯ ಚಿನ್ನಾಭರಣ ಕದ್ದು ಪರರೈಯಾಗಿದ್ದಾಗಿ ತಿಳಿಸಿದ್ದಾರೆ.

Home add -Advt

Related Articles

Back to top button