
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರು ಮಾನಸಿಕವಾಗಿ ನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲಹೊಂಗಲ-ಬೆಳಗಾವಿ ರಸ್ತೆಯ ಬೈಲವಾಡ ಹದ್ದಿಯ ಜಮೀನಿನಲ್ಲಿ ನಡೆದಿದೆ.
ನಾಗನೂರ ಗ್ರಾಮದ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕ, ಹಾಲಿ ಉಳವಿ ಚನ್ನಬಸವೇಶ್ವರ ನಗರದ ನಿವಾಸಿ ಬಸವರಾಜ ಕರಬಸಪ್ಪ ತಲ್ಲೂರ (66) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.