Kannada NewsKarnataka NewsNationalPolitics

*ಶಾಸಕ ಪಿ.ಎಂ.ನರೇಂದ್ರಸ್ವಾಮಿಗೆ ಸಂಪುಟ ದರ್ಜೆ ಸ್ಥಾನಮಾನ*

ಪ್ರಗತಿವಾಹಿನಿ ಸುದ್ದಿ : ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ E-F CC 545 ಇಪಿಸಿ 2024, ದಿನಾಂಕ 5.2.2025ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

ಅದೇ ದಿನಾಂಕದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನರೇಂದ್ರಸ್ವಾಮಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಎಲ್ಲಾ ಸೌಲಭ್ಯ ನೀಡಿ ಆದೇಶಿಸಲಾಗಿದೆ.

Home add -Advt

Related Articles

Back to top button