*ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹೊರ ಹಾಕುವಂತೆ ಆಗ್ರಹಿಸಿ ಪ್ರತಿಭಟಿಸಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ತಕ್ಷಣ ದೇಶದಿಂದ ಹೊರಗೆ ಹಾಕಬೇಕು ಎಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಾಂಗ್ರೇಸ್ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಚನ್ನಮ್ಮ ವೃತ್ತದಿಂದ ನಗರದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು,ಪಾಕಿಸ್ತಾನ ಭಯೋತ್ಪಾದಕರಿಗೆ ನೆಲೆ ಕೊಡುತ್ತಿದೆ. ಕಳೆದ 60-70 ವರ್ಷಗಳಿಂದ ಭಯೋತ್ಪಾದಕರಿಗೆ ಸಹಕಾರ ನೀಡಿ ಹಿಂದೂಗಳುಗೆ ತೊಂದರೆ ಕೊಡುತ್ತಿದೆ. ಭಾರತಕ್ಕೆ ಬೇರೆ ದೇಶಗಳು, ವಿದೇಶಗಳು ಸಹಕಾರಕೊಡ್ತಿವೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಅದಕ್ಕೆ ವಿರುದ್ಧವಾಗಿದ್ದಾರೆ. ನಿಮ್ಮ ಮಗ ಜವಾನನಾಗಿದ್ದರೆ ನಿಮಗೆ ದೇಶ ಪ್ರೇಮದ ಬಗ್ಗೆ ಗೊತ್ತಾಗುತ್ತಿತ್ತು. ಭಾರತದಲ್ಲಿರೋ ಪಾಕಿಸ್ತಾನಿಯರನ್ನು ಹೊರಗೆ ಕಳಿಸಿ ಅಂತ ಕೇಂದ್ರ ಸರ್ಕಾರ ಹೇಳಿದೆ. ಆದರೆ ಅವರನ್ನು ಕಾಂಗ್ರೇಸ್ ಸರ್ಕಾರ ಹೊರಗೆ ಹಾಕುವ ಕೆಲಸ ಮಾಡ್ತಿಲ್ಲ. ನಿಮಗೆ ಕೈ ಮುಗಿದು ಒತ್ತಾಯ ಮಾಡ್ತಿವಿ ಕರ್ನಾಟಕದಲ್ಲಿರೋ ಪಾಕಿಸ್ತಾನಿಯರನ್ನು ಹೊರಗೆ ಕಳಿಸುವ ಕೆಲಸ ಮಾಡಿ ಎಂದು ಆಗ್ರಹಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್,
ಮಹಾನಗರ
ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಹಾಗೂ ಮಹಾಂತೇಶ ದೊಡ್ಡಗೌಡರ ಮಾತನಾಡಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂ
ಎಲ್ ಮುತ್ತೆನ್ನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ರಾಜಶೇಖರ್ ಡೋಣಿ ಈರಯ್ಯ ಖೋತ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಜಿಲ್ಲಾ ಉಪಾಧ್ಯಕ್ಷ ಮಾರುತಿ ಕೊಪ್ಪದ, ವಿನಯ್ ಕದಂ, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಬಾಳೇಶ ಚವ್ವನ್ನವರ, ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ ಕೊಂಗಾಲಿ, ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನಯನಾ ಬಸ್ಮೆ, ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ಮುಖಂಡರಾದ ಮುರುಗೇಂದ್ರಗೌಡ ಪಾಟೀಲ, ಚೇತನ್ ಅಂಗಡಿ, ಸಿ.ಬಿ ಪಾಟೀಲ, ಮಂಡಲ ಅಧ್ಯಕ್ಷರುಗಳಾದ ಬಸವರಾಜ ಸಾಣಿಕೋಪ್ಪ, ಕೆ.ವಿ ಪಾಟೀಲ, ಮಹಾದೇವ ಶೆಕ್ಕಿ, ಬಸವರಾಜ ಬಂಡಿವಡ್ಡರ, ಮನೋಜ್ ಪಾಟೀಲ, ಪ್ರಶಾಂತ್ ಅಮ್ಮಿನಭಾವಿ, ವಿಠ್ಠಲ ಸಾಯಣ್ಣವರ, ವೀರಭದ್ರ ಪೂಜಾರಿ, ಮಹಾಂತೇಶ ಕುಡಚಿ ಹಾಗೂ ಪ್ರಮುಖ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.