
ಪ್ರಗತಿವಾಹಿನಿ ಸುದ್ದಿ: ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ಶಾಕ್ ಎದುರಾಗಿದೆ, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮತ್ತೆ ಜೈಲು ಶಿಕ್ಷೆ ಪ್ರಕಟವಾಗಿದೆ.
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿರುವ ಹೈದರಾಬಾದ್ ಸಿಬಿಐ ನ್ಯಾಯಾಲಯ, ಜನಾರ್ಧನ ರೆಡ್ದಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಆಂಧ್ರ ಹಾಗೂ ಕರ್ನಾಟಕ ಗಡಿ ಭಾಗದ ಓಬಳಾಪುರಂ ಅದಿರು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ಇಂದು ತೀಪು ಪ್ರಕಟಿಸಿದ್ದು, ಜನಾರ್ಧನ ರೆಡ್ಡಿ ಸೇರಿ ಒಟ್ಟು 5 ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.