
ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ, ವಾಗ್ಮಿ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ತನ್ನ್ ಬಹುಕಾಲದ ಗೆಳೆಯ ಶ್ರೀಕಂತ್ ಕಶ್ಯಪ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಚೈತ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದಾರೆ. ಚೈತ್ರಾ ಕುಂದಾಪುರ ಬಿಗ್ ಬಾಸ್ ಸ್ಪರ್ಧೆ ಬಳಿಕ ಬಾಯ್ಸ್ VS ಗರ್ಲ್ಸ್ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಮೊನ್ನೆ ಮಜಾ ಟಾಕೀಸ್ ನಲ್ಲಿಯೂ ಕಾಣಿಸಿಕೊಂಡಿದರು. ಇದೀಗ ಶ್ರೀಕಾಂತ್ ಕಶ್ಯಪ್ ಜೊತೆ ಚೈತ್ರಾ ಕುಂದಾಪುರ ವಿವಾಹ ವಾಗಿದ್ದಾರೆ.
ವಿವಾಹದ ಸಂದಭದಲ್ಲಿ ತಾಳಿ ಕಟ್ಟುವ ವೇಳೆ ಚೈತ್ರಾ ಕುಂದಾಪುರ ಭಾವುಕರಾಗಿದ್ದಾರೆ. ವಿವಾಹದ ಕೆಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.