Karnataka News

*ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ*

ಪ್ರಗತಿವಾಹಿನಿ ಸುದ್ದಿ : ಕಳೆದ ಒಂದು ವಾರದಿಂದ ಬ್ರೇಕ್ ನೀಡಿದ್ದ ಮಳೆರಾಯ, ಇದೀಗ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿರುವ ಕುರಿತು ಅಂದಾಜಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಂ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಹಾಸನ, ಶಿವಮೊಗ್ಗ ಚಿಕ್ಕಬಳ್ಳಾಪುರ ದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ 3-4 ದಿನಗಳಿಂದ ಒಣಹವೆ ಹಾಗೂ ಬಿಸಿಲು ಹೆಚ್ಚಿದ್ದು ತಾಪಮಾನ ಏರಿಕೆಯಿಂದ ಜನರು ಕಂಗಾಲಾಗಿದ್ದು, ಇದೀಗ ಮಳೆ ಬೀಳುವ ವಿಚಾರ ಕೊಂಚ ಸಮಾಧಾನ ತಂದಿದೆ.ಮೇ 12 ತನಕ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.

Home add -Advt

Related Articles

Back to top button