Karnataka News

*ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿ: 7 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ.

ಏರ್‌ಪೋರ್ಟ್‌ಗೆ ತೆರಳುವ ಬೇಗೂರು ಜಂಕ್ಷನ್ ಬಳಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಷತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ 35 ಮಂದಿ ಕಾರ್ಮಿಕರನ್ನು ಊಟಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಗಾಯಗೊಂಡ 7 ಮಂದಿ ಕಾರ್ಮಿಕರನ್ನು ಕೂಡಲೇ ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸ್ಥಳಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಸ್ತೆಗೆ ಪಲ್ಟಿಯಾಗಿದ್ದ ಬಸ್ ತೆರವು ಮಾಡಿದ್ದಾರೆ.

Home add -Advt

Related Articles

Back to top button