
ಪ್ರಗತಿವಾಹಿನಿ ಸುದ್ದಿ: ಒಳ ಮೀಸಲಾತಿ ಸಮೀಕ್ಷೆ ವೇಳೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ನಡೆದಿದೆ.
ಚಿತ್ರಸಾಲ ಪ್ರಾಥಮಿಕ ಶಾಲೆ ಶಿಕ್ಷಕ ನಾಗಶಟ್ಟಿ ಬಾಸಹಳ್ಳಿ (58) ಮೃತರು. ಚಿಂಚೋಳಿ ತಾಲೂಕಿನ ಬುರಗಪಳ್ಳಿ ನಿವಾಸಿಯಾಗಿರುವ ನಾಗಶಟ್ಟಿ ಸಮೀಕ್ಷೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.