Politics

*ಹೊಸಪೇಟೆಯಲ್ಲಿ ಸರ್ಕಾರದ 2 ವರ್ಷಗಳ ಸಾಧನಾ ಸಮರ್ಪಣಾ ಸಂಕಲ್ಪ ಸಮಾವೇಶ*

ಪ್ರಗತಿವಾಹಿನಿ ಸುದ್ದಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ.

ಪ್ರಗತಿಯತ್ತ ಕರ್ನಾಟಕ – ಸರ್ಕಾರದ 2 ವರ್ಷಗಳ ಸಾಧನೆಯ ಸಮರ್ಪಣಾ ಸಂಕಲ್ಪ ಸಮಾವೇಶ – 2025ನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಂಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಸೇರಿದಂತೆ ಎಲ್ಲಾ ಸಚಿವರು, ಶಾಸಕರು, ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದ್ದಾರೆ.

Home add -Advt

Related Articles

Back to top button