
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಿರುವುದನ್ನು ವಕೀಲೆ ಸುಧಾ ಕಟ್ಟಾ ಪ್ರಶ್ನಿಸಿದ್ದಾರೆ.
ಸುಪ್ರೀಂ ಕೋರ್ಟ್ ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರಾಜ್ಯ ಸರ್ಕಾರ ಡಾ.ಎಂ.ಎ.ಸಲೀಂ ಅವರನ್ನು ಡಿಜಿ-ಐಜಿಪಿಯನ್ನಾಗಿ ನೇಮಕ ಮಾಡಿದ್ದು, ಈ ನೇಮಕಾತಿ ರದ್ದು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ವಕೀಲೆ ಸುಧಾ ಪತ್ರ ಬರೆದಿದ್ದಾರೆ.
7 ದಿನಗಳಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ಪಿಐಎಲ್ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ.
ನೇಮಕಾತಿ ಬಗ್ಗೆ ಯಾವುದೇ ವಿಶೇಷ ಕಾರಣ ನೀಡದೆ, ಅವಧಿ ಉಲ್ಲೇಖಿಸದೇ ಡಿಜಿ-ಐಜಿಪಿ ನೇಮಕ ಮಾಡಲಾಗಿದೆ ಈ ಮೂಲ್ಕ ಸಂವಿಧಾನ ಮತ್ತು ಕಾನೂನು ಉಲ್ಲಂಘಿಸಲಾಗಿದೆ. ಡಾ.ಸಲೀಂ ಅವರ ನೇಮಕಾತಿ ಹಿಂಪಡೆಯಬೇಕು. ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ನೇಮಕಾತಿ ನಡೆಯಲಿ ಎಂದು ಒತ್ತಾಯಿಸಿದ್ದಾರೆ.