
ಪ್ರಗತಿವಾಹಿನಿ ಸುದ್ದಿ: ಡಂಬಲ್ಸ್ ನಿಂದ ಹೆಂಡತಿಯ ತಲೆಗೆ ಹೊಡೆದು ಹತ್ಯೆ ಮಾಡಿದ ಪತಿ ಬಳಿಕ ತಾನು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರದಲ್ಲಿ ಈ ಘಟನೆ ನಡೆದಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತರು.
ಇಬ್ಬರ ನಡುವೆ ಕೌಟುಂಬಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಇದೇ ಕಾರಣದಿಂದ ಹತ್ಯೆ ನಡೆದಿರಬಹುದೆಂದು ಊಹಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಗ್ರಾಮಾಂತರ ಜಿಲ್ಲೆ ಎಸ್ಪಿ ಸಿ.ಕೆ. ಬಾಬಾ ಹಾಗೂ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣದ ಕುರಿತು ದೂರು ದಾಖಲಾಗಿದೆ.