
ಪ್ರಗತಿವಾಹಿನಿ ಸುದ್ದಿ: ಶಿರೋಮಣಿ ಅಕಾಲಿ ದಳದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಸುಖದೇವ್ ಸಿಂಗ್ ಧಿಂಡ್ನಾ (89) ಇಂದು ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಧಿಂಡ್ನಾ ಇಂದು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸುಖದೇವ್ ಸಿಂಗ್ ದಿಂಡ್ನಾ ಅವರು ಪಂಜಾಬ್ನ ಸಂಗ್ರೂರ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ಬಳಿಕ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೇಂದ್ರ ಕ್ರೀಡಾ ಸಚಿವರಾಗಿದ್ದರು.