Karnataka News

*ಲಾರಿ ಡಿಕ್ಕಿ ರಭಸಕ್ಕೆ ಹಾರಿ ಹೋದ ಬೈಕ್ ಸವಾರನ ರುಂಡ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮಿನಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗೊರಹಳ್ಳಿ ಕೆರೆ ಏರಿಮೇಲೆ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ಬೈಕ್ ಸವಾರನ ರುಂಡವೇ ಹಾರಿ ಹೋಗಿದೆ.

ಮೃತರು ಪಿರಿಯಾಪಟ್ಟಣದ ಹಿಟ್ನೆಬಾಗಿಲು ನಿವಾಸಿಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button