Karnataka News

*ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ಆದೇಶ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಲು ಸಾಲು ಹತ್ಯೆ ಪ್ರಕರಣಗಳ ಬೆನ್ನಲ್ಲೇ ಕೋಮು ಸೌಹಾರ್ದತೆ ಕದಡುವ ವಾತಾವರಣ ನಿರ್ಮಾಣವಾಗಿದ್ದು, ಮುಸ್ಲಿಂ ಮುಖಂಡರು ಸರ್ಕಾರ, ಗೃಹ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಇದೀಗ ಜಿಲ್ಲೆಯಲ್ಲಿ ಮತ್ತೊಂದು ರೀತಿಯ ಬೆಳವಣಿಗೆಗಳು ನಡೆಯುತ್ತಿವೆ. ಹಿಂದೂ ಸಂಘಟನೆ ಮುಖಂಡರು, ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ.

Home add -Advt

ಇದೀಗ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್ ಜಾರಿಗೊಳಿಸಿದ್ದಾರೆ.

ಅರುಣ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

Related Articles

Back to top button