Karnataka News

*ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನಸಾಗರ: ನೂಕು ನುಗ್ಗಲು; ಓರ್ವ ಮಹಿಳೆ ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: 18 ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಕೆಲವೇ ಹೊತ್ತಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದತ್ತ ಹರಿದು ಬರುತ್ತಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನಸಾಗರವೇ ನೆರೆದಿದೆ. ಸ್ಟೇಡಿಯಂ ನ 18, 19, 20 ನೇ ಗೇಟ್ ಗಳನ್ನು ಓಪನ್ ಮಾಡುತ್ತಿದ್ದಂತೆ ಜನರು ಏಕಾಏಕಿ ಸ್ಟೇಡಿಯಂ ಒಳಗೆ ನುಗ್ಗಿದ್ದಾರೆ.

ಈ ವೇಳೆ ನೂಕು ನುಗ್ಗಲು ಉಂಟಾಗಿದೆ, ತೀವ್ರ ನೂಕುನುಗ್ಗಲಿನಿಂದಾಗಿ ಮಹಿಳೆಯೊಬ್ಬರು ಕೆಳಗೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದಾರೆ. ಅವರಿಗೆ ಸ್ಥಳದಲ್ಲಿದ್ದ ಜನರು ನೀರು ಕುಡಿಸಿ, ಗಾಳಿ ಹಾಕಿ ಆರೈಕೆ ಮಾಡಿದ ಘಟನೆ ನಡೆದಿದೆ.

Home add -Advt

Related Articles

Back to top button