Karnataka News

*ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ: 6 ಅಭಿಮಾನಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದಿರುವ ಆರ್ ಸಿಬಿ ವಿಜಯೋತ್ಸವ ನೋಡಲೆಂದು ಆಗಮಿಸಿದ್ದ 6 ಅಭಿಮಾನಿಗಳು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಜನಸಾಗರವೇ ಸ್ಟೆಡಿಯಂನತ್ತ ಹರಿದುಬಂದಿದೆ. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ನೆರೆದಿದ್ದ ಜನರು ಸ್ಟೇಡಿಯಂ ಗೇಟ್ ಗಳನ್ನು ಮುರಿದು ಪ್ರವಾಹದಂತೆ ಒಳನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಘಟನೆಯಲ್ಲಿ 6 ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. 15 ಜನರು ಅಸ್ವಸ್ಥರಾಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

Home add -Advt

Related Articles

Back to top button